ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಗಣ್ಯರ ಜಾಮೀನು ಅರ್ಜಿ ವಿಚಾರಣೆ

Last Updated 23 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿ ಇರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಎಸ್.ಎನ್.ಕೃಷ್ಣಯ್ಯ ಶೆಟ್ಟಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಡಾ.ಎಚ್.ಎನ್.ಕೃಷ್ಣ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ಹೈಕೋರ್ಟ್‌ನಲ್ಲಿ ನಡೆಯಲಿದೆ.

ಭೂಹಗರಣಕ್ಕೆ ಸಂಬಂಧಿಸಿದಂತೆ ಮೊದಲ ಇಬ್ಬರು ಆರೋಪಿಗಳಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ 10 ದಿನಗಳಿಂದ ಅವರು ನಗರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ. ಈ ಆರೋಪಿಗಳ ಪರ ವಕೀಲರ ವಾದ ಮುಗಿದಿದ್ದು, ದೂರುದಾರ ಸಿರಾಜಿನ್ ಬಾಷಾ ಅವರ ಪರ ವಕೀಲ ಸಿ.ಎಚ್.ಹನುಮಂತರಾಯ ಅವರು ವಾದ ಮುಂದುವರಿಸಲಿದ್ದಾರೆ.

ಅದೇ ರೀತಿ, ಕಟ್ಟಾ ಹಾಗೂ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ಆರಂಭಗೊಳ್ಳಲಿದೆ. ಕೆಐಎಡಿಬಿ ಭೂಹಗರಣದ ವಿವಾದದ ಸುಳಿಯಲ್ಲಿ ಸಿಕ್ಕಿರುವ ಕಟ್ಟಾ ಅವರಿಗೆ ವೈದ್ಯಕೀಯ ಕಾರಣಕ್ಕೆ ಜಾಮೀನು ನೀಡಲು ಲೋಕಾಯುಕ್ತ ಕೋರ್ಟ್ ನಿರಾಕರಿಸಿದೆ. ಆಯೋಗ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಷ್ಣ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದೆ.

ಈ ಮಧ್ಯೆ, ಕಟ್ಟಾ ಕ್ಯಾನ್ಸರ್ ಸಂಬಂಧ ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಸಂಜೆ ಮುಂಬೈನ ಲೀಲಾವತಿ ಆಸ್ಪತ್ರೆಗೆ ತೆರಳಿದ್ದಾರೆ. ಅವರ ಜೊತೆ ಅವರ ಆಪ್ತ ಸಹಾಯಕ ಹಾಗೂ ನಾಲ್ವರು ಪೊಲೀಸರು ತೆರಳಿರುವುದಾಗಿ ಮೂಲಗಳು ತಿಳಿಸಿವೆ.

ಭಾರತದಲ್ಲಿನ ಯಾವುದೇ ಆಸ್ಪತ್ರೆಯಲ್ಲಿ ಪೊಲೀಸ್ ಬೆಂಗಾವಲಿನೊಂದಿಗೆ ಚಿಕಿತ್ಸೆ ಪಡೆಯಲು ವಿಶೇಷ ಕೋರ್ಟ್ ಅನುಮತಿ ನೀಡಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT