ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ನೀರು ಪೂರೈಕೆ

Last Updated 10 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜಲಮಂಡಳಿಯು ಟಿ.ಕೆ.ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿ ಪ್ರದೇಶಗಳಲ್ಲಿ ಶುಕ್ರವಾರ ಕೈಗೊಂಡಿದ್ದ ತುರ್ತು ನಿರ್ವಹಣಾ ಕಾರ್ಯ ಪೂರ್ಣಗೊಂಡಿದೆ.

ತುರ್ತು ನಿರ್ವಹಣಾ ಕಾರ್ಯ ಕೈಗೊಂಡಿದ್ದ ಹಿನ್ನೆಲೆಯಲ್ಲಿ ಬನಶಂಕರಿ, ಕುಮಾರಸ್ವಾಮಿ ಲೇಔಟ್, ಗಿರಿನಗರ, ಪದ್ಮನಾಭನಗರ, ಜಯನಗರ 6, 7 ಮತ್ತು 8ನೇ ಬ್ಲಾಕ್, ಜೆ.ಪಿ.ನಗರ, ವಿ.ವಿ.ಪುರ, ಮಾಗಡಿ ರಸ್ತೆ, ಮೈಸೂರು ರಸ್ತೆ, ಬಸವನಗುಡಿ, ಗಾಂಧಿ ಬಜಾರ್, ಬನಪ್ಪ ಪಾರ್ಕ್ ಮುಂತಾದ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ನಿರ್ವಹಣಾ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಶನಿವಾರದಿಂದ ನೀರು ಪೂರೈಕೆಯಾಗಲಿದೆ.

ಎಂ.ಪಿ. ಪ್ರಕಾಶ್ ಪುಣ್ಯತಿಥಿ
ಬೆಂಗಳೂರು:
ಮಾಜಿ ಉಪ ಮುಖ್ಯಮಂತ್ರಿ, ದಿವಂಗತ ಎಂ.ಪಿ. ಪ್ರಕಾಶ್ ಅವರ ಪುಣ್ಯತಿಥಿಯನ್ನು ನಗರದಲ್ಲಿ ಗುರುವಾರ ಆಚರಿಸಲಾಯಿತು.

ಇಲ್ಲಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ `ಕರುಣಾಶ್ರಯ~ ಸಂಸ್ಥೆಯಲ್ಲಿ `ಅಖಿಲ ಕರ್ನಾಟಕ ಎಂ.ಪಿ. ಪ್ರಕಾಶ್ ಜನಹಿತ ವೇದಿಕೆ~ ಆಯೋಜಿಸಿದ್ದ ಪುಣ್ಯತಿಥಿ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಎಂ.ವಿ. ರಾಜಶೇಖರನ್,  ಆರ್.ವಿ. ದೇಶಪಾಂಡೆ, ಬಿಬಿಎಂಪಿ ಸದಸ್ಯ ಆಂಜನೇಯ ರೆಡ್ಡಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT