ಬಳ್ಳಾರಿ: ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತರ ವರದಿಯಲ್ಲಿ ತಮ್ಮ ಹೆಸರು ಪ್ರಸ್ತಾಪ ಆಗಿರುವುದರಿಂದ ಕಳಂಕಿತರಾಗಿ ಮುಂದುವರಿಯಲು ಇಚ್ಛಿಸದ ಬಿ.ಶ್ರೀರಾಮುಲು ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಸಿರಗುಪ್ಪ ಶಾಸಕ ಎಂ.ಎಸ್. ಸೋಮಲಿಂಗಪ್ಪ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಜಿ.ಜನಾರ್ದನ ರೆಡ್ಡಿ ಅವರ ನಿವಾಸದಲ್ಲಿ ನಡೆದ ರಹಸ್ಯ ಸಭೆಯಲ್ಲಿ ಭಾಗವಹಿಸಿ ಹೊರಬಂದ ಅವರು, ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
`ಶ್ರೀರಾಮುಲು ಹೊಸ ಪಕ್ಷ ಸ್ಥಾಪನೆ ಮಾಡುವ ಕುರಿತು ನನಗೆ ಮಾಹಿತಿ ಇಲ್ಲ. ಒಂದು ವೇಳೆ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಬಯಸಿದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನೂ ಸಿದ್ದ~ ಎಂದು ಹೇಳಿದರು.
ಶ್ರೀರಾಮುಲು ಅವರು ಹೊಸದಾಗಿ ಜನಾದೇಶಕ್ಕೆ ತೆರಳಲಿದ್ದಾರೆ. ಪಕ್ಷ ಸ್ಥಾಪನೆ ಕುರಿತು ಮಾಹಿತಿ ಇಲ್ಲ ಎಂದು ಹೂವಿನ ಹಡಗಲಿ ಶಾಸಕ ಚಂದ್ರ ನಾಯ್ಕ ತಿಳಿಸಿದರು.