ಕಾರ್ಕಳ: ಡಾ.ಶಿವರಾಮ ಕಾರಂತರ ಹೆಸರಿನಲ್ಲಿ ನೀಡಲಾಗುತ್ತಿರುವ `ಶಿವರಾಮ ಕಾರಂತ ಪ್ರಶಸ್ತಿ~ಗೆ ಈ ಬಾರಿ ಪತ್ರಕರ್ತ ಇಂದೂಧರ ಹೊನ್ನಾಪುರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶಿವರಾಮ ಕಾರಂತ ಪ್ರತಿಷ್ಠಾನದ ಅಧ್ಯಕ್ಷ ಕೆ. ಅಮರನಾಥ ಶೆಟ್ಟಿ, ಪ್ರಧಾನ ಕಾರ್ಯ ದರ್ಶಿ ಜಯಪ್ರಕಾಶ ಮಾವಿನಕುಳಿ ತಿಳಿಸಿದ್ದಾರೆ. ಪ್ರಶಸ್ತಿ ಮೊತ್ತ ರೂ 15ಸಾವಿರವನ್ನು ನಿಟ್ಟೆ ವಿದ್ಯಾಸಂಸ್ಥೆಯು ಜಸ್ಟಿಸ್ ಕೆ.ಎಸ್. ಹೆಗ್ಡೆ ಹೆಸರಿನಲ್ಲಿ ನೀಡಲಿದೆ.