ಸಂಘದ ಪ್ರತಿಭಟನೆ ಹಿನ್ನೆಲೆಯಲ್ಲಿ ಇಎಸ್ಐ ಆಸ್ಪತ್ರೆ ಹಿರಿಯ ಅಧೀಕ್ಷಕ ಡಾ. ಗೋಪಾಲಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಬಹುತೇಕ ಬೇಡಿಕೆಗಳು ಶೀಘ್ರವೇ ನೆರವೇರಲಿವೆ. ವೈದ್ಯರ ಹಾಗೂ ಸಿಬಂದಿ ಕೊರತೆಯನ್ನೂ ನೀಗಿಸಲಾಗುವುದು ಎಂದು ಅವರು ಆಶ್ವಾಸನೆ ನೀಡಿದರು.
ಸಂಘದ ಜಿಲ್ಲಾ ಅಧ್ಯಕ್ಷ ಸಂತೋಷ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೀವ್ ಕುಲಾಲ್, ಜಲಂಧರ್ ಶೆಟ್ಟಿ, ರಾಜೇಶ್, ನಾಗೇಶ್ ಬಂಟ್ವಾಳ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು. ಅನಿರ್ದಿಷ್ಟಾವಧಿಗೆ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ, ಬೇಡಿಕೆ ಈಡೇರಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ಮಂಗಳವಾರವೇ ಮುಕ್ತಾಯಗೊಂಡಿತು.