ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೂ ಒಂದು ಅಗ್ನಿಪರೀಕ್ಷೆ

Last Updated 16 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಸಿಬಿಐ ಅಧಿಕಾರಿಗಳು ನನ್ನ ಮನೆಯ ಮೇಲೆ ದಾಳಿ ನಡೆಸಿರುವುದು ನೋವಿನ ಸಂಗತಿ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,  `ಸಿಬಿಐ ಹಾಗೂ ನ್ಯಾಯಾಂಗದ ಬಗ್ಗೆ ಅಪಾರ ಗೌರವ ಇದೆ. ತನಿಖೆಗೆ ಸಹಕರಿಸುತ್ತೇನೆ. ನಾನು ನಿರ್ದೋಷಿ ಎಂಬುದು ತನಿಖೆಯಿಂದ ಗೊತ್ತಾಗುತ್ತದೆ~ ಎಂದು ವಿಶ್ವಾಸ ವ್ಯಕ್ತಪಡಿಸಿದರು.

`ಸಿಬಿಐ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ~ ಎಂದು ತಿಳಿಸಿದ ಅವರು, `ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೂ ಹಲವು ಅಗ್ನಿಪರೀಕ್ಷೆಗಳನ್ನು ಎದುರಿಸಿದ್ದೇನೆ. ಇದೂ ಒಂದು ಅಗ್ನಿಪರೀಕ್ಷೆ~ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT