`ಸದ್ಯ ದೇಶದ ಆರ್ಥಿಕತೆ ಸವಾಲಿನ ಹಾದಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ಅನಗತ್ಯ ಸರಕುಗಳ ಆಮದಿನ ಮೇಲೆ ನಿರ್ಬಂಧ ಹೇರಲಾಗುವುದು' ಎಂದು ಅವರು ಶನಿವಾರ ರಾಜ್ಯಸಭೆಯಲ್ಲಿ ಹೇಳಿದರು.
ತೆರಿಗೆಗಿಂತಲೂ ಹಣದುಬ್ಬರದ ಬಿಸಿ ಬಡವರನ್ನು ಹೆಚ್ಚಾಗಿ ತಟ್ಟಿದೆ. ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ತರಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಚ್ಚಾತೈಲ ಬೆಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ತೈಲ ಬೆಲೆ ಹೆಚ್ಚಿಸಲಾಗುವುದೇ ಎಂಬ ಪ್ರಶ್ನೆಗೆ, ಇಂತಹ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದರು.