ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರ ನಾಮಪತ್ರಗಳು ತಿರಸ್ಕೃತ

Last Updated 5 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ ಇಬ್ಬರು ಅಭ್ಯರ್ಥಿಗಳ ಉಮೇದುವಾರಿಕೆ ತಿರಸ್ಕೃತಗೊಂಡಿದೆ.

ಸೋಮವಾರ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಕೆ. ಬಲರಾಮು ಹಾಗೂ ಪಕ್ಷೇತರ ಅಭ್ಯರ್ಥಿ ಬಿ.ಎನ್. ಲೋಕೇಶ್ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

ನಾಮಪತ್ರದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಎಂದು ಗುರುತು ಮಾಡಿದ್ದ ಬಲರಾಮು ಅವರು `ಎ' ಮತ್ತು `ಬಿ' ಫಾರಂ ಒದಗಿಸುವಲ್ಲಿ ವಿಫಲರಾಗಿದ್ದರು. ಅಲ್ಲದೇ, ನಿಗದಿತ ಸಂಖ್ಯೆಯ ಸೂಚಕರ ಸಹಿ ಇಲ್ಲದ ಕಾರಣ ನಾಮಪತ್ರ ತಿರಸ್ಕೃತಗೊಂಡಿದೆ. ಕೆ.ಎಸ್. ದೊರೆಸ್ವಾಮಿ ಅವರಿಗೆ ಬಿಜೆಪಿಯ `ಬಿ' ಫಾರಂ ದೊರೆತಿದ್ದು, ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಇನ್ನು ಪಕ್ಷೇತರ ಅಭ್ಯರ್ಥಿ ಬಿ.ಎನ್. ಲೋಕೇಶ್, ನಿಗದಿತ ನಮೂನೆಯಲ್ಲಿ ಅಫಿಡವಿಟ್ ಸಲ್ಲಿಸದೇ ಇದುದ್ದರಿಂದ ಅವರ ನಾಮಪತ್ರವೂ ತಿರಸ್ಕೃತಗೊಂಡಿದೆ. ಸಲ್ಲಿಕೆಯಾಗಿದ್ದ ಒಟ್ಟು 14 ನಾಮಪತ್ರಗಳ ಪೈಕಿ 12 ನಾಮಪತ್ರಗಳು ಸಿಂಧುವಾಗಿದೆ ಎಂದು ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT