ನದಿಯಲ್ಲಿ ಸ್ನಾನ ಮಾಡುವಾಗ ನಿತೀಶ್ ಮುಳುಗಿದ. ಈತನನ್ನು ರಕ್ಷಿಸಲು ಮುಂದಾದ ರವಿಗೌಡ ಸಹ ನೀರುಪಾಲಾದ. ನಿತೀಶ್ ದ್ವಿತೀಯ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದು, ಈತನಿಗೆ ಈಜಲು ಬರುತ್ತಿರಲಿಲ್ಲ ಎನ್ನಲಾಗಿದೆ. ರವಿಗೌಡ ಉತ್ತಮ ಈಜುಗಾರನಾಗಿದ್ದು, ಬೆಂಗಳೂರಿನಲ್ಲಿ ಬುಧವಾರ ನಡೆದ ಪೇದೆ ನೇಮಕಾತಿ ದೈಹಿಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದ ಎಂದು ಕುಟುಂಬದ ಮೂಲಗಳು ತಿಳಿಸಿವೆ.