ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

Last Updated 13 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಹೊನ್ನಾವರ (ಉ.ಕ.ಜಿಲ್ಲೆ): ಸಮುದ್ರದಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರು ಪಾಲಾದ  ಘಟನೆ ತಾಲ್ಲೂಕಿನ ಅಪ್ಸರಕೊಂಡ ಬೀಚ್ ಸಮೀಪ ಸೋಮವಾರ ಸಂಭವಿಸಿದೆ.

ನೀರುಪಾಲಾದ ವಿದ್ಯಾರ್ಥಿಗಳನ್ನು ರಾಯಲ್‌ಕೇರಿಯ ರಘುವೀರ ಆರ್. ನಾಯ್ಕ (17) ಹಾಗೂ ಸಂದೀಪ ಶಂಕರ ಆಚಾರಿ (17) ಎಂದು ಗುರುತಿಸಲಾಗಿದೆ. ನೀರಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ಯುವಕ ಗುಂಡಬಾಳಾದ ಸುಬ್ರಹ್ಮಣ್ಯ ಶಂಕರ ನಾಯ್ಕ ಎಂಬಾತನನ್ನು ಸುತ್ತಮುತ್ತಲಿನ ಜನರು ರಕ್ಷಿಸಿದ್ದಾರೆ.

ರಘುವೀರನ ಶವ ಪತ್ತೆಯಾಗಿದ್ದು ಸಂದೀಪನ ಶವಕ್ಕಾಗಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗುಗಾರರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ರಘುವೀರ ಇಲ್ಲಿಯ ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ಸಂದೀಪ ಪ್ರತಿಭೋದಯದಲ್ಲಿ ಕಂಪ್ಯೂಟರ್ ವ್ಯಾಸಂಗ ಮಾಡುತ್ತಿದ್ದರು. ಮಂಕಿ ಪೊಲೀಸ್ ಠಾಣೆಯ ಸಿ.ಎಚ್.ಸಿ. ಚಂದ್ರಶೇಖರ ನಾಯ್ಕ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT