ನವದೆಹಲಿ (ಪಿಟಿಐ): ಜ.30ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮಾನವ ಹಕ್ಕುಗಳ ಹೋರಾಟಗಾರ್ತಿ ಇರೋಮ್ ಶರ್ಮಿಳಾ ಅವರಿಗೆ ದೆಹಲಿ ಕೋರ್ಟ್ ಶುಕ್ರವಾರ ವಾರಂಟ್ ಹೊರಡಿಸಿದೆ. 2006ರಲ್ಲಿ ಆಮರಣಾಂತ ಉಪವಾಸದ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ಶರ್ಮಿಳಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ಅಕ್ಟೋಬರ್ 30ರಂದು ಕೋರ್ಟ್ಗೆ ಹಾಜರಾಗುವಂತೆ ಅವರಿಗೆ ಸೂಚಿಲಾಗಿತ್ತು. ಆದರೆ ಶರ್ಮಿಳಾ ಕೋರ್ಟ್ಗೆ ಬಂದಿರಲಿಲ್ಲ.
ಮಣಿಪುರದಲ್ಲಿ ಜಾರಿಯಲ್ಲಿರುವ ವಿವಾದಿತ ಸಶಸ್ತ್ರಪಡೆ ವಿಶೇಷಾಧಿಕಾರ ಕಾಯ್ದೆ (ಎಎಫ್ಎಸ್ಪಿಎ) ರದ್ದುಮಾಡಬೇಕೆಂದು ಆಗ್ರಹಿಸಿ ಕಳೆದ 12ಕ್ಕೂ ಹೆಚ್ಚು ವರ್ಷಗಳಿಂದ ಶರ್ಮಿಳಾ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.