ದಕ್ಷಿಣ ಕರ್ನಾಟಕದ ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳು ವಾರ್ಷಿಕ ಹಂಗಾಮವನ್ನು ಜೂನ್ ಹಾಗೂ ಜುಲೈನಲ್ಲಿ ಆರಂಭಿಸುತ್ತವೆ. ಬಹುತೇಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಹಂಗಾಮವನ್ನು ಮುಗಿಸುತ್ತವೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಇಳುವರಿ ಶೇಕಡ 9 ರಿಂದ 10.5 ರವರೆಗೆ ಇರುತ್ತದೆ. (ಅಂದರೆ 1000 ಕೆ.ಜಿ. ಕಬ್ಬನ್ನು ಅರೆದರೆ 90 ರಿಂದ 105 ಕೆ.ಜಿ. ಸಕ್ಕರೆ ಉತ್ಪಾದನೆ).
ಇನ್ನು ಉತ್ತರ ಕರ್ನಾಟಕದ ಬಿಜಾಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಸಕ್ಕರೆ ಕಾರ್ಖಾನೆಗಳು ವಾರ್ಷಿಕ ಹಂಗಾಮನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ಆರಂಭಿಸುತ್ತವೆ. ಬಹುತೇಕ ಮೇ ಅಥವಾ ಜೂನ್ನಲ್ಲಿ ಹಂಗಾಮನ್ನು ಮುಗಿಸುತ್ತವೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಇಳುವರಿ ಶೇಕಡ 11 ರಿಂದ 12.5 ರವರೆಗೆ ಇರುತ್ತದೆ.