ಬೆಂಗಳೂರು : ನಗದಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಇಸ್ಕಾನ್ ದೇವಾಲಯದ ಗೋಡೆ ಕುಸಿದು ಪಕ್ಕದಲ್ಲಿದ್ದ ಕೊಳೆಗೇರಿಯ ಗುಡಿಸಲಿನ ಮೇಲೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಘಟನೆಯಲ್ಲಿ ಏಳು ವರ್ಷದ ಮಗು ಸೇರಿದಂತೆ ಮೂರು ಮಂದಿ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಐದು ಗುಡಿಸಲುಗಳಿಗೆ ಹಾನಿಯಾಗಿದೆ.
ಮೃತರ ದೇಹವನ್ನು ಹೊರತೆಗೆಯಲಾಗಿದ್ದು, ಜಯ (7) ಚನ್ನಗಿರಿಯಪ್ಪ (50) ಎಂದು ಗುರುತಿಸಲಾಗಿದೆ. ಅಲ್ಲದೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ಎಸಿಪಿ ಕಮಲ್ ಪಂತ್ ತಿಳಿಸಿದ್ದಾರೆ.