ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಪ್ರಶಸ್ತಿ ಸ್ಫೂರ್ತಿ ನೀಡಿದೆ: ಜೂಲನ್

Last Updated 25 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಆಗಿರುವುದು ಮತ್ತಷ್ಟು ಸಾಧನೆ ಮಾಡಲು ಸ್ಫೂರ್ತಿ ನೀಡಿದೆ~ ಎಂದು ಭಾರತ ಕ್ರಿಕೆಟ್ ತಂಡದ ನಾಯಕಿ ಜೂಲನ್ ಗೋಸ್ವಾಮಿ ಹೇಳಿದ್ದಾರೆ.

`ನಾನು ಈ ಪ್ರಶಸ್ತಿಯನ್ನು ನಿರೀಕ್ಷಿಸಿರಲಿಲ್ಲ. ಆದರೆ ಬುಧವಾರ ಮಧ್ಯಾಹ್ನ ಈ ವಿಷಯ ಗೊತ್ತಾಗುತ್ತಿದ್ದಂತೆ ತುಂಬಾ ಖುಷಿಯಾಯಿತು. ಇದೊಂದು ನನ್ನ ಶ್ರಮಕ್ಕೆ ಸಿಕ್ಕ ಪ್ರತಿಫಲ~ ಎಂದು ಜೂಲನ್ `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿದ್ದಾರೆ.

ಮುಂದಿನ ತಿಂಗಳು ಟ್ವೆಂಟಿ-20 ಹಾಗೂ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ವೆಸ್ಟ್‌ಇಂಡೀಸ್‌ಗೆ ತೆರಳಲಿರುವ ಜೂಲನ್ ಸಹ ಆಟಗಾರ್ತಿಯರೊಂದಿಗೆ ಉದ್ಯಾನ ನಗರಿಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ಅಭ್ಯಾಸದಲ್ಲಿ ತೊಡಗಿದ್ದಾರೆ.

`ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಮುಂಬರುವ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಇದು ಸ್ಫೂರ್ತಿಯಾಗಲಿದೆ~ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT