ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪಗೆ ಛೀಮಾರಿ

Last Updated 23 ಏಪ್ರಿಲ್ 2013, 19:33 IST
ಅಕ್ಷರ ಗಾತ್ರ

ನವದೆಹಲಿ: ಕೋಮು ಭಾವನೆ ಕೆರಳಿಸುವ ಪ್ರಚೋದನಾಕಾರಿ ಭಾಷಣ ಮಾಡಿದ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಚುನಾವಣಾ ಆಯೋಗ ಛೀಮಾರಿ ಹಾಕಿದ್ದು, ಇನ್ನು ಮುಂದೆ ಹೀಗೆ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದೆ.

ಶಿವಮೊಗ್ಗ ನಗರದಿಂದ ವಿಧಾನಸಭೆಗೆ ಸ್ಪರ್ಧಿಸಿರುವ ಈಶ್ವರಪ್ಪ ಏಪ್ರಿಲ್ 9ರಂದು `ಅಲ್ಪಸಂಖ್ಯಾತ ಸಮುದಾಯದ ಯುವಕರು 68 ಯುವತಿಯರನ್ನು ಅಪಹರಿಸಿದ್ದಾರೆ. ಉದ್ಯೋಗ ಮತ್ತಿತರ ಆಮಿಷವೊಡ್ಡಿ ಅವರನ್ನು ಎಳೆದೊಯ್ದು 6 ತಿಂಗಳು, ವರ್ಷದ ಬಳಿಕ ಬೀದಿಗೆ ಬಿಸಾಡಿದ್ದಾರೆ' ಎಂದು ಮಾಡಿರುವ ಪ್ರಚೋದನಕಾರಿ ಭಾಷಣವನ್ನು ಆಯೋಗ ಪರಿಗಣಿಸಿ ಛೀಮಾರಿ ಹಾಕಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT