ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪಗೆ ಸಂಕಷ್ಟ

Last Updated 10 ಏಪ್ರಿಲ್ 2013, 19:50 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಸ್ಲಿಮರ ವಿರುದ್ದ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ  ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಜಿಲ್ಲಾ ಅಧ್ಯಕ್ಷ ಸಯ್ಯದ್ ವಾಹಿದ್ ಅಡ್ಡು ಎರಡನೇ ಜೆಎಂಎಫ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಸಿಆರ್‌ಪಿಸಿ 200, ಐಪಿಸಿ 499 ಮತ್ತು 500ರ ಅಡಿಯಲ್ಲಿ (ಮಾನಹಾನಿ ಹಾಗೂ ಕ್ರಿಮಿನಲ್ ಪ್ರಕರಣ) ಈಶ್ವರಪ್ಪ ವಿರುದ್ದ ನಗರದ ಎರಡನೇ ಜೆಎಂಎಫ್‌ಸಿ ನ್ಯಾಯಾಧೀಶ ಅರ್ಜುನ್ ಮಳ್ಳೂರ್ ಅವರಿಗೆ ವಕೀಲ ಎ.ಟಿ. ಬೆಳಿಯಪ್ಪ ಮೂಲಕ ಸಯ್ಯದ್ ವಾಹಿದ್ ಅಡ್ಡು ದೂರು ನೀಡಿದ್ದಾರೆ.
  
ಇದಕ್ಕೆ ಪ್ರತಿಕ್ರಿಯಿಸಿದ ಕೆ.ಎಸ್. ಈಶ್ವರಪ್ಪ, ಮುಸ್ಲಿಮರು ಶಿವಮೊಗ್ಗ ಒಂದರಲ್ಲೇ 68 ಜನ ಎಳೆ ವಯಸ್ಸಿನ ಬ್ರಾಹ್ಮಣ ವಿದ್ಯಾರ್ಥಿನಿಯರನ್ನು `ಲವ್ ಜಿಹಾದ್' ಹೆಸರಿನಲ್ಲಿ 6ರಿಂದ 8 ತಿಂಗಳು ಬಳಸಿ, ಬಿಸಾಕಿ ಹೋಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ತಾನು ದಾಖಲೆ ನೀಡಲು ಸಿದ್ಧ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT