ಯಲಹಂಕ: ಜೆಡಿಎಸ್ನ ಥಣಿಸಂದ್ರ ವಾರ್ಡ್ ಘಟಕ ಮತ್ತು ಕೆಂಪೇಗೌಡ ವೈದ್ಯಕೀಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಾರಾಯಿಪಾಳ್ಯದ ಸೆಂಟ್ ಜವೇರಿಯ ಆಂಗ್ಲ ಶಾಲೆಯಲ್ಲಿ ಉಚಿತ ಕಣ್ಣಿನ ಪರೀಕ್ಷೆ ಮತ್ತು ಕಣ್ಣಿನ ಪೊರೆಗೆ ಆಧುನಿಕ ಶಸ್ತ್ರಚಿಕಿತ್ಸೆಯ ಮೂಲಕ ಐಒಎಲ್ ಅಳವಡಿಕೆ ಶಿಬಿರ ಏರ್ಪಡಿಸಲಾಗಿತ್ತು.
ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಜೆಡಿಎಸ್ ಮುಖಂಡ ಎಂ. ಜಯಗೋಪಾಲಗೌಡ, `ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡಜನರು ವಾಸವಾಗಿದ್ದು, ಇವರಿಗೆ ಕಣ್ಣಿನ ಸಮಸ್ಯೆ ಉಂಟಾದರೆ ಚಿಕಿತ್ಸೆ ಪಡೆಯುವ ಶಕ್ತಿ ಇರುವುದಿಲ್ಲ. ಈ ದಿಸೆಯಲ್ಲಿ ಅಂತಹ ಜನರಿಗೆ ಅನುಕೂಲವಾಗಲೆಂದು ಉಚಿತವಾಗಿ ಕಣ್ಣಿನ ತಪಾಸಣೆ ಮತ್ತು ಅಗತ್ಯವಿರುವವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲು ವ್ಯವಸ್ಥೆ ಮಾಡಲಾಗಿದೆ~ ಎಂದರು.
ಬ್ಯಾಟರಾಯನಪುರ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಜೆ.ಎಂ.ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎನ್.ವೇಣುಗೋಪಾಲ್, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಟಿ.ಎನ್.ಚಂದ್ರಶೇಖರಗೌಡ, ಮುಖಂಡರಾದ ಮುಕುಂದ ರಾವ್, ಸಿ. ಜೋಸೆಫ್, ಟಿ.ಎಂ.ಶ್ರೀನಿವಾಸ್, ಎಂ.ಉಮೇಶ್, ಶಾಲೆಯ ಸಂಸ್ಥಾಪಕ ಸೈಯದ್ ಉಬೇದುಲ್ಲಾ ಮೊದಲಾದವರು ಹಾಜರಿದ್ದರು. ಒಟ್ಟು 260 ಮಂದಿ ಶಿಬಿರದ ಪ್ರಯೋಜನ ಪಡೆದರು.