ರಾಜ್ಯದಲ್ಲಿಯೂ ಕಳೆದ ಬಾರಿಗಿಂತ ಈ ಬಾರಿ ಮತ್ತಷ್ಟು ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಕಾರ್ಯಕರ್ತರು ದೃತಿಗೆಡದೆ ಪಕ್ಷದಲ್ಲಿ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಗೋವಿಂದರಾವ್ ಕುಲಕರ್ಣಿ, ಶರಣಯ್ಯ ಬಂಡಿ, ರಾಮಣ್ಣ ಕಲಾಲ, ರಾಮಣ್ಣ ಯಡ್ಡೋಣಿ, ರಮೇಶ ಶಾಸ್ತ್ರಿ, ನೀಲಕಂಠಪ್ಪ ಬಣ್ಣದಬಾವಿ, ಮುಖಂಡರಾದ ನಾಗಪ್ಪ ಕಲ್ಮನಿ, ಶರಣಪ್ಪ ಕೂಡ್ಲೂರು ಸೇರಿದಂತೆ ಹಲವರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.