ಉತ್ತರಾಖಂಡದಲ್ಲಿ ಜೂನ್ 15 ರಿಂದ 17ರ ವರೆಗೆ ಎಡೆಬಿಡದೆ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಸಂಭವಿಸಿ ಭೂಕುಸಿತವಾಗಿತ್ತು. ಇದರಲ್ಲಿ ಕೊಚ್ಚಿಹೋದ ಯಾತ್ರಿಗಳು, ಜಾನುವಾರುಗಳ ಬಗ್ಗೆ ಇದುವರೆಗೂ ಸ್ಪಷ್ಟ ಅಂಕಿ ಅಂಶ ದೊರೆತಿಲ್ಲ. ಕಳೆದ 15 ದಿನಗಳಲ್ಲಿ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ 80ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಎಲ್ಲಾ ಮೃತದೇಹಗಳೂ ಜಲವಾಸಿ ಪ್ರಾಣಿಗಳಿಂದ ತಿನ್ನಲ್ಪಟ್ಟಿದ್ದು ಗುರುತು ಪತ್ತೆಯಾಗದಂತಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ವಿಪತ್ತು ನಿರ್ವಹಣೆಗೆ ನಿಯೋಜಿಸಲ್ಪಟ್ಟಿರುವ ಉತ್ತರ ಪ್ರದೇಶದ ವಿಶೇಷ ಪೊಲೀಸ್ ತಂಡವು ಹರಿದ್ವಾರದಲ್ಲಿ 30 ಮೃತದೇಹಗಳನ್ನು ಪತ್ತೆಹಚ್ಚಿದ್ದು, ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ ನಂತರ 29 ಮೃತದೇಹಗಳ ಅಂತ್ಯಸಂಸ್ಕಾರ ನಡೆಸಲಾಗಿದೆ.