ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ), ಅಮೆರಿಕದ ಬಂಡವಾಳ ಹೂಡಿಕೆದಾರ ವಾರನ್ ಬಫೆಟ್ ಅವರ ಗೌರವಾರ್ಥ ಏರ್ಪಡಿಸಿದ್ದ ಔತಣಕೂಟದಲ್ಲಿ ಅವರು ಮಾತನಾಡುತ್ತಿದ್ದರು. ‘ಉದ್ದಿಮೆದಾರರು ದಾನಶೀಲತೆ ಅನುಸರಿಸುವುದನ್ನು ಕಡ್ಡಾಯಗೊಳಿಸಬೇಕೆಂದು ನನಗೆ ಅನಿಸುವುದಿಲ್ಲ. ದಾನ ನೀಡುವ ಪ್ರವೃತ್ತಿ ರೂಢಿಸಿಕೊಳ್ಳಲು ನಾವು ಜನರನ್ನು ಉತ್ತೇಜಿಸಬೇಕಷ್ಟೆ’ ಎಂದರು.