ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಮಿಗಳಿಗೆ ನಾರಾಯಣಮೂರ್ತಿ ಸಲಹೆ:ಬೆಂಗಳೂರಿನಿಂದಾಚೆ ಯೋಚಿಸಿ

Last Updated 7 ಜೂನ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಐಟಿ ಮತ್ತು ಬೆಂಗಳೂರಿನಿಂದಾಚೆಗೆ ಯೋಚಿಸಿ. ಬೇರೆ ಬೇರೆ ಪ್ರದೇಶಗಳಲ್ಲಿ ವೈವಿಧ್ಯಮಯ ವಾಣಿಜ್ಯೋದ್ಯಮಗಳನ್ನು ಸ್ಥಾಪಿಸಲು ಮುಂದಾಗಿ~ ಎಂದು ಇನ್ಫೋಸಿಸ್  ಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ಸರ್ಕಾರ ಮತ್ತು ಉದ್ಯಮಿಗಳಿಗೆ ಕರೆ ನೀಡಿದರು.

ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಗುರುವಾರ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ (ಜಿಮ್) ಉದ್ಘಾಟನಾ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
`ಸುಸ್ಥಿರ ಮತ್ತು ಸಮತೋಲನದ ಅಭಿವೃದ್ಧಿ ದೃಷ್ಟಿಯಿಂದ ಬೆಂಗಳೂರಿನ ಹೊರಗೆ ಕಾರ್ಖಾನೆಗಳನ್ನು ಸ್ಥಾಪಿಸಬೇಕಾಗಿದೆ. ಪರ್ಯಾಯ ಹೂಡಿಕೆ ಮತ್ತು ರಫ್ತು ಹೆಚ್ಚಳಕ್ಕೆ ಆದ್ಯತೆ ನೀಡಬೇಕು~ ಎಂದು ಅವರು ಸಲಹೆ ನೀಡಿದರು.

`ಜಿಮ್, ಕೈಗಾರಿಕಾ ಬೆಳವಣಿಗೆಗಾಗಿ ರಾಜ್ಯ ಸರ್ಕಾರ ಪ್ರದರ್ಶಿಸುತ್ತಿರುವ ಕ್ರಿಯಾಶೀಲ ಕಾಳಜಿಗೆ ಸಂಕೇತವಾಗಿದೆ. ಆದರೂ ಕರ್ನಾಟಕ ಕೈಗಾರಿಕಾ ರಾಜ್ಯ ಎನಿಸಿಕೊಳ್ಳಲು ಬಹುದೂರ ಸಾಗಬೇಕಾಗಿದೆ~ ಎಂದು ಅವರು ಅಭಿಪ್ರಾಯಪಟ್ಟರು.

ಮೂರು ಸೂತ್ರ: `ರಾಜ್ಯದಲ್ಲಿ ವಾಣಿಜ್ಯೋದ್ಯಮ ಸದೃಢವಾಗಿ ಬೆಳೆಯಲು ಸರ್ಕಾರ ಪಾರದರ್ಶಕ ನೀತಿಯನ್ನು ಅಳವಡಿಸಿಕೊಳ್ಳಬೇಕು, ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕು, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಬೇಕು~ ಎಂದು ಮೂರು ಸೂತ್ರಗಳನ್ನು ಮಂಡಿಸಿದರು.`ವಾಣಿಜ್ಯೋದ್ಯಮಕ್ಕೆ ಪೂರಕವಾದ ವಾತಾವರಣ ನಿರ್ಮಿಸಲು ಸರ್ಕಾರ, ಉದ್ಯಮ ಮತ್ತು ಹೂಡಿಕೆದಾರರು ಒಟ್ಟಿಗೆ ಕೆಲಸ ಮಾಡಬೇಕು~ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT