ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಖಾತರಿ ಕೂಲಿ ಹಣ ವಿವಾದ: ಲಾಠಿ ಪ್ರಹಾರ

Last Updated 1 ಏಪ್ರಿಲ್ 2011, 6:35 IST
ಅಕ್ಷರ ಗಾತ್ರ

ಕೊಪ್ಪಳ: ಉದ್ಯೋಗ ಖಾತರಿ ಯೋಜನೆಯ ಕೂಲಿಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಲಾಠಿ ಪ್ರಹಾರ ಮಾಡಿದ ಪ್ರಕರಣದ ತನಿಖೆಯ ಜವಾಬ್ದಾರಿ ಹೊತ್ತಿರುವ ಈಶಾನ್ಯ ವಲಯ ಐ.ಜಿ.ಪಿ ಗಗನ್‌ದೀಪ್ ಗುರುವಾರ ಇಲ್ಲಿಗೆ ಆಗಮಿಸಿ ಪರಿಶೀಲಿಸಿದರು.ಸಂಜೆ ಆಗಮಿಸಿದ ಅವರು ಲಾಠಿ ಪ್ರಹಾರ ನಡೆದ ತಾಲ್ಲೂಕು ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
 

 ನಂತರ ಕಚೇರಿಯಲ್ಲಿ ಸಿಬ್ಬಂದಿಯೊಂದಿಗೆ ಮಾತನಾಡಿ, ಅಂದಿನ ಘಟನೆ ಕುರಿತಂತೆ ಮಾಹಿತಿ ಪಡೆದರು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ನಂತರ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸಹ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿ ಸಂಗ್ರಹಿಸಿ, ತನಿಖೆಯನ್ನು ಚುರುಕುಗೊಳಿಸಲಿದ್ದಾರೆ ಎಂದೂ ಇವೇ ಮೂಲಗಳು ಸ್ಪಷ್ಟಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT