`ಸುಮಾರು ಹತ್ತು ವರ್ಷಗಳಿಂದ ಅರ್ಹರಿಗೆ ಉದ್ಯೋಗ ನೀಡದೆ ಮಂಡಲಿ ನಿರ್ಲಕ್ಷ್ಯ ಧೋರಣೆ ತಾಳಿದೆ. 300ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದರೂ ಉದ್ಯೋಗ ನೀಡಲು ಮಂಡಲಿ ಮುಂದೆ ಬರುತ್ತಿಲ್ಲ. ರಾಜ್ಯದ ವಿವಿಧ ಭಾಗಗಳ 250ಕ್ಕೂ ಹೆಚ್ಚು ಮೃತ ಉದ್ಯೋಗಿಗಳ ಕುಟುಂಬ ವರ್ಗದವರಿಗೆ ಕೆಲಸ ನೀಡಬೇಕಿದೆ~ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಗೌಡೇಗೌಡ ಅಸಮಾಧಾನ ವ್ಯಕ್ತಪಡಿಸಿದರು.