ಬೆಂಗಳೂರು: ಒಂದಿಲ್ಲೊಂದು ಕಾರಣಕ್ಕೆ ಮುಂದಕ್ಕೆ ಹೋಗುತ್ತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಈಗ ಹೊಸದೊಂದು ಗಡುವು ನಿಗದಿಯಾಗಿದೆ. ಈ ಬಾರಿಯ ಗಡುವು ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ.
ಕೊಪ್ಪಳ ಉಪಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಭಾನುವಾರ ಘೋಷಿಸಿದರು.
ಕೇರಳ ಸಮಾಜದವರು ಇಲ್ಲಿ ಏರ್ಪಡಿಸಿದ್ದ ಓಣಂ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೌಡರು, `ಕೊಪ್ಪಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಭಾರಿ ಅಂತರದಿಂದ ಜಯ ಗಳಿಸುತ್ತಾರೆ~ ಎಂದು ವಿಶ್ವಾಸ ವ್ಯಕ್ತಪಡಿಸಿದರು.