ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ

Last Updated 5 ಏಪ್ರಿಲ್ 2011, 9:10 IST
ಅಕ್ಷರ ಗಾತ್ರ

ನವದೆಹಲಿ, (ಪಿಟಿಐ): ಭ್ರಷ್ಟಾಚಾರವನ್ನು ಸಮರ್ಥವಾಗಿ ತಡೆಯಲು ~ಜನ ಲೋಕಪಾಲ್~  ಮಸೂದೆ ಅಂಗೀಕರಿಸಬೇಕೆಂದು ಆಗ್ರಹಿಸಿ ಭ್ರಷ್ಟಾಚಾರ ವಿರೋಧಿ ಚಳುವಳಿಯ ನೇತಾರ,  ಖ್ಯಾತ ಸಮಾಜ ಸೇವಕ,  ಅಣ್ಣಾ ಹಜಾರೆ ಅವರು ಮಂಗಳವಾರ ಇಲ್ಲಿ  ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

ಮಹಾತ್ಮಾ ಗಾಂಧಿ ಅವರ ಸಮಾಧಿ ಸ್ಥಳ ರಾಜ್ ಘಾಟ್ ದಲ್ಲಿ ಮಹಾತ್ಮಾ ಗಾಂಧಿ ಅವರಿಗೆ ಗೌರವ ಸಲ್ಲಿಸಿ ಮೆರವಣಿಗೆಯಲ್ಲಿ ಬಂದ  ಅಣ್ಣಾ ಹಜಾರೆ ಅವರು,  ನಂತರ ಇಲ್ಲಿನ ಜಂತರ್ ಮಂತರ್ ದಲ್ಲಿ  ಉಪವಾಸ ಸತ್ಯಾಗ್ರಹ ಆರಂಭಿಸಿದರು.

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ~ಭ್ರಷ್ಟಾಚಾರ ದೇಶದ ಒಂದು ದೊಡ್ಡ ಪಿಡುಗು. ಅದನ್ನು  ನಿಗ್ರಹಿಸಲು ಜನ ಲೋಕಪಾಲ್ ಮಸೂದೆಯನ್ನು ಅಂಗೀಕರಿಸಿ ಕಾನೂನು ರಚಿಸುವುದೊಂದೆ ಈಗ ಉಳಿದಿರುವ ಮಾರ್ಗ~ ಎಂದು ಪ್ರತಿಪಾದಿಸಿದರು.

ಸಾಮಾಜಿಕ ಕಳಕಳಿ ಹೊಂದಿರುವ ಖ್ಯಾತ ಸಾಮಾಜಿಕ ಹೋರಾಟಗಾರರಾದ  ಸ್ವಾಮಿ ಅಗ್ನಿವೇಶ್, ಕಿರಣ್ ಬೇಡಿ ಮತ್ತು ಸಂದೀಪ್ ಪಾಂಡೆ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT