`ಡೀಸೆಲ್ ಬೆಲೆ ಏರಿಕೆಯಿಂದ ಕೃಷಿಯ ವೆಚ್ಚ ಹೆಚ್ಚಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಕೃಷಿಗೆ ಉಪಯೋಗಿಸುವ ಟ್ರ್ಯಾಕ್ಟರ್, ಮೀನುಗಾರರು ಬಳಸುವ ಬೋಟ್ಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ಒದಗಿಸಬೇಕು ಬತ್ತ, ತೊಗರಿ ಮುಂತಾದ ಧಾನ್ಯಗಳಿಗೆ ವೈಜ್ಞಾನಿಕವಾಗಿ ಬೆಲೆ ನಿಗದಿಮಾಡಬೇಕು~ಎಂದು ಆಗ್ರಹಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದ ಪ್ರತಿಭಟನಾಕಾರರು ಅಲ್ಲಿ ಈ ಎಲ್ಲ ಬೇಡಿಕೆಗಳನ್ನುಳ್ಳ ಮನವಿಪತ್ರವನ್ನು ಜಿಲ್ಲಾಧಿಕಾರಿಗೆ ಹಸ್ತಾಂತರಿಸಿದರು.