ಮೈಸೂರು: `ರಾಜ್ಯದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಲೋಕಾಯುಕ್ತ ನ್ಯಾಯಾಲಯದ ಕಟಕಟೆ ಏರಿರುವುದು ಆಡಳಿತ ನಡೆಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ~ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅಭಿಪ್ರಾಯಪಟ್ಟರು.
`ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ. ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಇಲ್ಲವಾದಲ್ಲಿ ಶಿಕ್ಷೆ ಅನಿವಾರ್ಯ~ ಎಂದುಸುದ್ದಿಗಾರರಿಗೆ ತಿಳಿದರು.