ಬೆಂಗಳೂರು: ವಕೀಲ ವಿನೋದ್ಕುಮಾರ್ ದಾಖಲಿಸಿರುವ ಖಾಸಗಿ ದೂರಿನ ವಿಚಾರಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಕೊನೆಗೂ ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾದರು.
ನಂತರ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸುಧೀಂದ್ರರಾವ್ ಅವರು, ಪ್ರಕರಣದ ವಿಚಾರಣೆಯನ್ನು ಸೆ. 24ಕ್ಕೆ ಮುಂದೂಡಿದರು.
ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗ ಜಂತಕಲ್ ಗಣಿ ಕಂಪೆನಿಗೆ ಕಾನೂನು ಬಾಹಿರವಾಗಿ ಗಣಿ ಗುತ್ತಿಗೆ ನವೀಕರಣಕ್ಕೆ ಶಿಫಾರಸು ಮಾಡಿರುವುದು ಮತ್ತು ಜೊತೆಗೆ ಪಕ್ಷಪಾತದಿಂದ ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಭೂಮಿ ಮಂಜೂರು ಮಾಡಿ ಪ್ರತಿಯಾಗಿ ಅನಿತಾ ಕುಮಾರ ಸ್ವಾಮಿ ಅವರ ಹೆಸರಿನಲ್ಲಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ವಕೀಲ ವಿನೋದ್ಕುಮಾರ್ ಅವರು, ಅವರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು