ಲಖನೌ, (ಐಎಎನ್ಎಸ್): ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆಯ (ಎನ್ ಆರ್ ಎಚ್ ಎಂ) ಅನುಷ್ಠಾನದಲ್ಲಿ ಬಹುಕೋಟಿ ಹಗರಣ ನಡೆದಿದ್ದು, ಈ ಸಂಬಂಧ ಉತ್ತರ ಪ್ರದೇಶದ ಮಾಜಿ ಸಚಿವ, ಬಹುಜನ ಸಮಾಜ ಪಕ್ಷದಿಂದ ಉಚ್ಚಾಟನೆಗೊಂಡಿರುವ ಬಾಬು ಸಿಂಗ್ ಖುಶ್ವಾ ಅವರ ಮತ್ತು ಅವರ ಸಮೀಪವರ್ತಿಗಳ ಮನೆ, ಕಚೇರಿಗಳು ಸೇರಿದಂತೆ ಉತ್ತರ ಪ್ರದೇಶದ ಒಟ್ಟು 55 ಸ್ಥಳಗಳ ಮೇಲೆ ಸಿಬಿಐ ಬುಧವಾರ ದಾಳಿ ನಡೆಸಿ ಮಾಹಿತಿ ಕಲೆ ಹಾಕಿದೆ.