ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಎಂಎ ಕಾರ್ಯವೈಖರಿಗೆ ಸಿಎಜಿ ತೀವ್ರ ಅಸಮಾಧಾನ

Last Updated 23 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎನ್‌ಡಿಎಂಎ) ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಮಹಾಲೇಖಪಾಲರು, ಪ್ರಮುಖ ಪ್ರದೇಶಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಂತಹ ಘಟನೆಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಪ್ರಾಧಿಕಾರ ಹಿಂದುಳಿದಿದೆ ಎಂದು ಆರೋಪಿಸಿದೆ.

ಎನ್‌ಡಿಎಂಎ ಸಂಸ್ಥೆ ಕುರಿತು ಸಿಎಜಿ ನೀಡಿರುವ ಪ್ರಗತಿ ವರದಿಯಲ್ಲಿ  ಈ ವಿಷಯವನ್ನು ಪ್ರಸ್ತಾಪಿಸಿದೆ. ಈ ವರದಿಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಮಂಗಳವಾರ ಮಂಡಿಸಲಾಯಿತು.

`ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಾಜ್ಯಗಳ ನೋಡಲ್ ಸಂಸ್ಥೆಗಳೊಂದಿಗೆ ಸಮರ್ಪಕವಾಗಿ ಸಮನ್ವಯ ಸಾಧಿಸದೇ, ನಿರ್ವಹಣೆಗೆ ಬೇಕಾದ ಹಣಕಾಸು ವ್ಯವಸ್ಥೆಯನ್ನೂ ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿದೆ. ಇದರಿಂದ ವಿಪತ್ತು ನಿರ್ವಹಣೆಗೆ ತೊಡಕುಂಟಾಗಿದೆ' ಎಂದು ಸಿಎಜಿ ವರದಿ ತಿಳಿಸಿದೆ. ಈ ಕುರಿತು ರಾಷ್ಟ್ರಮಟ್ಟದಲ್ಲಿ ಯಾರು ಯಾವ ಪಾತ್ರನಿರ್ವಹಿಸಬೇಕೆಂದು ಸಲಹೆ ನೀಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT