ಮುದ್ದೇಬಿಹಾಳ: ಪಟ್ಟಣದ ಎ.ಪಿ.ಎಂ.ಸಿ. ವಾಣಿಜ್ಯ ಮಳಿಗೆಯಲ್ಲಿ ಕಳೆದ ಎರಡು ದಿನಗಳಿಂದ ಕರೆಂಟಿಲ್ಲದೇ ವ್ಯಾಪಾರಸ್ಥರಿಗೆ ತೀವ್ರ ತೊಂದರೆಯಾಗಿದ್ದು, ಹೆಸ್ಕಾಂ ಸಿಬ್ಬಂದಿ ದೂರು ನೀಡಿದರೂ ಸ್ಪಂದಿಸುತ್ತಿಲ್ಲ ಎಂದು ವಿ.ಎಸ್. ಪಾಟೀಲ ದೂರಿದ್ದಾರೆ.
ವಾಣಿಜ್ಯ ಮಳಿಗೆಯಲ್ಲಿ ವಿದ್ಯುತ್ ಇಲ್ಲದಿರುವುದರಿಂದ ಕಂಪ್ಯೂಟರ್ ಸೇರಿದಂತೆ ಯಾವುದೇ ಯಂತ್ರಗಳು ಕೆಲಸ ಮಾಡುತ್ತಿಲ್ಲ. ಹೆಸ್ಕಾಂ ಕಚೇರಿಗೆ ಹೋಗಿ ವಿದ್ಯುತ್ ಅವ್ಯವಸ್ಥೆ ಬಗ್ಗೆ ಲಿಖಿತ ದೂರು ನೀಡಿ ಬಂದಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದಾರೆ.