ಬೆಂಗಳೂರು (ಪಿಟಿಐ): ಭೂಹಗರಣಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಲೋಕಾಯುಕ್ತ ಪೊಲೀಸರು ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ ಐ ಆರ್) ದಾಖಲಿಸಿದ್ದಾರೆ.
ಕೈಗಾರಿಕಾ ಉದ್ದೇಶಕ್ಕಾಗಿ ಸ್ವಾಧಿನಪಡಿಸಿಕೊಂಡ ಭೂಮಿಯನ್ನು ಡಿನೋಟಿಫೈ ಮಾಡುವ ಸಮಯದಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಮೇರೆಗೆ ಮುರುಗೇಶ್ ನಿರಾಣಿ ಮತ್ತು ಇತರರು ಸೇರಿದಂತೆ 8 ಮಂದಿಯ ವಿರುದ್ಧ ಲೋಕಾಯುಕ್ತ ಪೊಲೀಸರು ಶನಿವಾರ ಪ್ರಥಮ ಮಾಹಿತಿ ವರದಿ ದಾಖಲಿಸಿದ್ದಾರೆ. ಸಚಿವರ ಸಹೋದರ ಎಚ್.ಆರ್. ನಿರಾಣಿ ಅವರ ಹೆಸರೂ ಎಫ್ಐಆರ್ನಲ್ಲಿ ದಾಖಲಾಗಿದೆ.