ಕೋಲ್ಕತ್ತ (ಪಿಟಿಐ): ಎಲ್ಪಿಜಿ ಸಿಲಿಂಡರ್ ಬೆಲೆ ಹೆಚ್ಚಳವನ್ನು ವಿರೋಧಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, `ಇದೊಂದು ಅತ್ಯಂತ ಕೆಟ್ಟ ಹಾಗೂ ದುರದೃಷ್ಟಕರ~ ಬೆಳವಣಿಗೆ ಎಂದು ಲೇವಡಿ ಮಾಡಿದ್ದಾರೆ.
`ಯುಪಿಎ ಎರಡನೇ ಅವಧಿಯಲ್ಲಿ ಎಷ್ಟು ಬಾರಿ ಬೆಲೆ ಏರಿಕೆಯಾಗಿದೆ ಎನ್ನುವುದು ನಿಮಗೆ ಗೊತ್ತಾ?~ ಎಂದು ದೀದಿ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
`ಮತ್ತೆ ಕೇಂದ್ರ ಸರ್ಕಾರ ಎಲ್ಪಿಜಿ ಪ್ರತಿ ಸಿಲಿಂಡರ್ ದರವನ್ನು ರೂ 11.42 ಹೆಚ್ಚಿಸಿದ್ದು, ಇದು ತುಂಬಾ ಕೆಟ್ಟ ನಿರ್ಧಾರ~ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಪಿಡಿಪಿ ಪ್ರತಿಭಟನೆ (ಶ್ರೀನಗರ ವರದಿ): ಎಲ್ಪಿಜಿ ಬೆಲೆ ಏರಿಕೆ ವಿರೋಧಿಸಿ ಶ್ರೀನಗರದಲ್ಲಿ ವಿರೋಧ ಪಕ್ಷ ಪಿಡಿಪಿ ಪ್ರತಿಭಟನೆ ನಡೆಸಿತು.
ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ನೇತೃತ್ವದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು, `ರಾಜ್ಯದಲ್ಲಿ ಸಿಲಿಂಡರ್ ಮಿತಿಯನ್ನು ಹೆಚ್ಚಿಸಬೇಕೆಂದು~ ಆಗ್ರಹಿಸಿದರು.