ಜತೆಗೆ ₨5,000 ದಂಡ ವಿಧಿಸಲು ಅವಕಾಶವಿದೆ. ಬದುಕಿನ ಹಕ್ಕಿಗಾಗಿ ಹೋರಾಟ ಮಾಡುವ ನೌಕರರನ್ನು ಹೀಗೆ ಕಾಯ್ದೆ, ಕಾನೂನುಗಳಿಂದ ಕಟ್ಟಿ ಹಾಕುವ ಕ್ರಮ ಸರಿಯಲ್ಲ ಎಂದು ಎಐಯುಟಿಯುಸಿ ಸಂಘಟನೆ ತಿಳಿಸಿದೆ. ಬೆಳಗಾವಿ ಅಧಿವೇಶನದಲ್ಲಿ ಎಸ್ಮಾ ಕಾಯ್ದೆಯನ್ನು ಅಂಗೀಕರಿಸಿರುವ ಸರ್ಕಾರದ ಕ್ರಮವನ್ನು ರಾಜ್ಯ ಲಾರಿ ಮಾಲೀಕರು ಮತ್ತು ಏಂಜೆಂಟರ ಸಂಘ ಖಂಡಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಮನ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದೆ.