ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆನ್ ಸ್ಮಾರಕ ಜ್ಞಾನ ಕೇಂದ್ರವಾಗಲಿ

Last Updated 29 ಜನವರಿ 2011, 18:30 IST
ಅಕ್ಷರ ಗಾತ್ರ

ಚಿತ್ರದುರ್ಗ: ತಾಲ್ಲೂಕಿನ ಸೀಬಾರ ಬಳಿ ಇರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಸ್ಮಾರಕವನ್ನು ಲೋಕಾರ್ಪಣೆ ಮಾಡಲು ಶನಿವಾರ ನಗರಕ್ಕೆ ಆಗಮಿಸಿದ್ದ ದಲೈಲಾಮಾ ಹರ್ಷ, ಉಲ್ಲಾಸದಿಂದ ಪುಳಕಿತರಾಗಿದ್ದರು.

ಸ್ಮಾರಕ ಲೋಕಾರ್ಪಣೆ ನಂತರ ಮಾತನಾಡಿದ ಅವರು, ನಿಜಲಿಂಗಪ್ಪ ದೂರದೃಷ್ಟಿ ಹೊಂದಿದ್ದರು. ಅವರ ಸ್ಮಾರಕದ ಆವರಣ ಜ್ಞಾನ ಕೇಂದ್ರವಾಗಬೇಕು.
ಈ ಮೂಲಕ ಜನತೆಯಲ್ಲಿ ಜಾಗೃತಿ ಮೂಡಿಸಬೇಕು. ಬದಲಾವಣೆ ಒತ್ತಡದಿಂದ ಸಾಧ್ಯವಿಲ್ಲ. ಮನಪರಿವರ್ತನೆ ಮುಖ್ಯ. ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಇಲ್ಲಿ ಸೇರಿ ಚಿಂತನೆ ನಡೆಸಬೇಕು. ನಿಜಲಿಂಗಪ್ಪ ಅವರಂತಹ ಮಹಾನ್ ವ್ಯಕ್ತಿ ಸಲ್ಲಿಸಿದ ಸೇವೆ ಕುರಿತು ಜನರಿಗೆ ತಿಳಿಸಬೇಕು ಎಂದರು.

ಇಂದಿನ ಯುವಪೀಳಿಗೆ ಸಾವಿರಾರು ವರ್ಷಗಳ ಸಂಪ್ರದಾಯ ಮೌಲ್ಯಗಳನ್ನು ನಿರ್ಲಕ್ಷಿಸುತ್ತಿರುವುದು ದುರದೃಷ್ಟಕರ. ಮೌಲ್ಯಗಳನ್ನು ಎತ್ತಿ ಹಿಡಿದು ಪ್ರಾಮಾಣಿಕ ಬದುಕು ಸಾಗಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾಡಳಿತ, ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ಚಿತ್ರದುರ್ಗ, ಎಸ್. ನಿಜಲಿಂಗಪ್ಪ ನ್ಯಾಷನಲ್ ಫೌಂಡೇಷನ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಲೋಕಾರ್ಪಣೆ ಸಮಾರಂಭ ಆಯೋಜಿಸಲಾಗಿತ್ತು.

ದಲೈಲಾಮಾ ಮೊದಲು       ನಿಜಲಿಂಗಪ್ಪ ಅವರ ಸ್ಮಾರಕಕ್ಕೆ ಪುಷ್ಪ    ಅರ್ಪಿಸಿದರು. ನಂತರ ಗಣ್ಯರ ಜತೆ ವೇದಿಕೆಗೆ ಬಂದ ಅವರು ತಕ್ಷಣ ತಮ್ಮ ಪೀಠದಲ್ಲಿ ಆಸೀನರಾಗದೇ ವೇದಿಕೆ ಹಿಂಭಾಗದ ಬ್ಯಾನರ್‌ನಲ್ಲಿದ್ದ ಎಸ್.        ನಿಜಲಿಂಗಪ್ಪ ಅವರ ಭಾವಚಿತ್ರ ನೋಡಲು ತೆರಳಿದರು. ಕ್ಷಣಕಾಲ ಅಲ್ಲಿ ನಿಂತು ಭಾವಚಿತ್ರವನ್ನು ತದೇಕಚಿತ್ತದಿಂದ   ನೋಡಿದ ನಂತರ ತಮ್ಮ ಆಸನದಲ್ಲಿ ಕುಳಿತರು. ನಗರಕ್ಕೆ ಇದು ದಲೈಲಾಮಾ ಅವರ ಎರಡನೇ ಭೇಟಿ. ಈ ಹಿಂದೆ 2002ರಲ್ಲಿ ಮುರುಘಾ ಮಠದ  ‘ಬಸವಶ್ರೀ’ ಪ್ರಶಸ್ತಿ ಸ್ವೀಕರಿಸಲು   ಆಗಮಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT