ಬೆಂಗಳೂರು: `ಜಮೀನು ವಿಷಯಕ್ಕೆ ಸಂಬಂಧಪಟ್ಟಂತೆ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಸಬ್ ಇನ್ಸ್ಪೆಕ್ಟರ್ ದೌರ್ಜನ್ಯವನ್ನು ಎಸಗುತ್ತಿದ್ದಾರೆ' ಎಂದು ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಎನ್.ನರಸಿಂಹಮೂರ್ತಿ ಆರೋಪಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಮಂಚೇನಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸುಧಾಕರ ರೆಡ್ಡಿ ಹಾಗೂ ಪೊಲೀಸ್ ಉಪ ವರಿಷ್ಠಾಧಿಕಾರಿ ದೇವಯ್ಯನವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ನನ್ನ ಮೇಲೆ ದೌರ್ಜನ್ಯವನ್ನು ಎಸಗಿದ್ದಾರೆ' ಎಂದು ಅವರು ಆರೋಪಿಸಿದರು.