ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕರೂಪ ನೀತಿಯಡಿ ದರ ನಿಗದಿಗೆ ಆಗ್ರಹ

Last Updated 24 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ಎಲ್ಲ ರಾಜ್ಯಗಳಲ್ಲಿಯೂ ಏಕರೂಪ ನೀತಿಯಡಿ ಪೆಟ್ರೋಲ್-ಡೀಸೆಲ್ ದರ ನಿಗದಿಪಡಿಸುವಂತೆ ಸಾರಿಗೆ ಹಾಗೂ ಗೃಹ ಸಚಿವ ಆರ್. ಅಶೋಕ ಗುರುವಾರ ಇಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಬಿಬಿಎಂಪಿಯ ಹನ್ನೊಂದು ಸ್ಥಾಯಿ ಸಮಿತಿಗಳ ಅಧ್ಯಕ್ಷರ ಕಚೇರಿಗಳ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

`ಪೆಟ್ರೋಲ್ ಹಾಗೂ ಡೀಸೆಲ್ ದರ ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯಿದೆ. ಹಾಗಾಗಿ, ಪೆಟ್ರೋಲ್-ಡೀಸೆಲ್ ದರದಲ್ಲಿ ರಾಜ್ಯ ರಾಜ್ಯಗಳಿಗೂ ವ್ಯತ್ಯಾಸ ಕಂಡು ಬರುತ್ತಿದೆ. ಹೀಗಾಗಿ, ದೇಶವ್ಯಾಪಿ ಏಕರೂಪ ನೀತಿಯಡಿ ಪೆಟ್ರೋಲ್- ಡೀಸೆಲ್ ದರ ನಿಗದಿಪಡಿಸಲು ಕೇಂದ್ರಕ್ಕೆ ನಾಲ್ಕು ಬಾರಿ ಪತ್ರ ಬರೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ~ ಎಂದು ಅವರು ವಿಷಾದಿಸಿದರು.

ನೆರೆಯ ಗೋವಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಕಡಿಮೆಯಿರುವ ಬಗ್ಗೆ ಗಮನಸೆಳೆದು ರಾಜ್ಯದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡುತ್ತೀರಾ ಎಂಬ ಪ್ರಶ್ನೆಗೆ, `ಕಾದು ನೋಡಿ~ ಎಂದಷ್ಟೇ ಸಚಿವರು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT