ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಏಳು ಕೋಟಿ ಕುಟುಂಬಗಳ ಬಡತನ ನಿರ್ಮೂಲನೆ ಗುರಿ'

Last Updated 3 ಜೂನ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗ್ರಾಮೀಣ ಜನರ ಜೀವನಾಧಾರ ಯೋಜನೆಯಾದ `ಆಜೀವಿಕಾ ಪ್ರತಿಷ್ಠಾನ'ದ ಚಟುವಟಿಕೆಯನ್ನು ದೇಶಾದ್ಯಂತ ಅದರಲ್ಲೂ ಕೇಂದ್ರ ಹಾಗೂ ಪೂರ್ವ ಭಾಗಗಳಲ್ಲಿ ತ್ವರಿತವಾಗಿ ವಿಸ್ತರಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಿಹೇಳಿದರು.

ಇಲ್ಲಿಯ ರಾಷ್ಟ್ರೀಯ ಗ್ರಾಮೀಣ ಜೀವನಾಧಾರ ಪ್ರತಿಷ್ಠಾನದ (ಎನ್‌ಆರ್‌ಎಲ್‌ಎಂ) ದ್ವಿತೀಯ ವಾರ್ಷಿಕೋತ್ಸವದಲ್ಲಿ ಮಾತನಾಡಿ ಸೋನಿಯಾ ಅವರು ಈ ವಿಷಯ ತಿಳಿಸಿದರು.

`ಶೀಘ್ರ ನಡೆಯಲಿರುವ ಲೋಕಸಭಾ ಚುನಾವಣೆ ಹಾಗೂ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮೇಲೆ ಕಣ್ಣಿಟ್ಟು ಈ ಯೋಜನೆ ಅನುಷ್ಠಾನಕ್ಕೆ ಒತ್ತಡ ಹೇರಲಾಗುತ್ತಿದೆ' ಎಂಬ ಟೀಕೆಯನ್ನು ಇದೇ ಸಂದರ್ಭಗಳಲ್ಲಿ ಅಲ್ಲಗಳೆದರು.

ದುರ್ಬಲ ವರ್ಗದವರು ಅದರಲ್ಲೂ ಮಹಿಳೆಯರ ಸಬಲೀಕರಣವೇ ಯುಪಿಎ ಸರ್ಕಾರದ ಮುಖ್ಯ ಗುರಿ ಎಂದು ಸೋನಿಯಾ ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.

ಈಶಾನ್ಯ ರಾಜ್ಯಗಳ ಹಾಗೂ ಉತ್ತರಾಖಂಡ, ಹಿಮಾಚಲ ಪ್ರದೇಶದಂತಹ ಗುಡ್ಡಗಾಡು ರಾಜ್ಯಗಳ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೀಡುವ ಯೋಜನೆಯನ್ನೂ ಸೋನಿಯಾ ಈ ಸಂದರ್ಭದಲ್ಲಿ ಘೋಷಿಸಿದರು

ಮುಂದಿನ ಹತ್ತು ವರ್ಷಗಳ ಅವಧಿಯಲ್ಲಿ 7 ಕೋಟಿ ಬಡತನ ರೇಖೆ ಕೆಳಗಿನ (ಬಿಪಿಎಲ್)  ಕುಟುಂಬಗಳನ್ನು ಬಡತನದಿಂದ ಮುಕ್ತಗೊಳಿಸುವ ಗುರಿ ಹೊಂದಲಾಗಿದ್ದು ಇದು ನಿಜಕ್ಕೂ ಪ್ರಯಾಸದ ಕೆಲಸ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT