ಬೆಂಗಳೂರು: ನಾಲ್ಕು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಸುಬೋಧ್ ಯಾದವ್– ಕೃಷಿ ಆಯುಕ್ತರು.
ಎನ್.ಪ್ರಕಾಶ್– ಉಪ ಆಯುಕ್ತರು, ಕಾರ್ಮಿಕ ಇಲಾಖೆ, ಬೆಂಗಳೂರು.
ಡಾ.ಮುದ್ದುಮೋಹನ್– ಯೋಜನಾ ನಿರ್ದೇಶಕರು, ಸರ್ವಶಿಕ್ಷಣ ಅಭಿಯಾನ, ಬೆಂಗಳೂರು.
ಪಿ.ಹೇಮಲತಾ– ವಿಶೇಷ ಕರ್ತವ್ಯಾಧಿಕಾರಿ, ರಾಷ್ಟ್ರೀಯ ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣಾ ವ್ಯವಸ್ಥೆ, ಇಸ್ರೋ ಪ್ರಧಾನ ಕಚೇರಿ, ಬೆಂಗಳೂರು.
ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಕೆ.ಆರ್.ನಿರಂಜನ್ ಅವರಿಗೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ.