ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಒಬಿ: ಅಮೃತ ಮಹೋತ್ಸವಕ್ಕೆ ಇಂದು ಚಾಲನೆ

Last Updated 9 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಚೆನ್ನೈ ಮೂಲದ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ (ಐಒಬಿ) ಅಮೃತ ಮಹೋತ್ಸವ ವರ್ಷಾಚರಣೆಗೆ   ಗುರುವಾರ (ನಾಳೆ) ಚಾಲನೆ ನೀಡಲಾಗುವುದು.

ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಮೃತ ಮಹೋತ್ಸವ  ವರ್ಷಾಚರಣೆ ಉದ್ಘಾಟಿಸಲಿದ್ದಾರೆ. ಬ್ಯಾಂಕ್ ಅಸ್ತಿತ್ವಕ್ಕೆ ಬಂದು 75 ವರ್ಷಗಳನ್ನು ಪೂರ್ಣಗೊಳಿಸಿದ ಸ್ಮರಣಾರ್ಥ, ಬ್ಯಾಂಕ್ 75 ಹೊಸ ಶಾಖೆ ಮತ್ತು 75 ಎಟಿಎಂಗಳನ್ನು ಆರಂಭಿಸಲಿದೆ. ಬೆಂಗಳೂರು ಹೊರವಲಯದ ಬಿಡದಿ, ಜಿಗಣಿ, ಸುಂಕದಕಟ್ಟೆ, ಬಿದರಿಕಲ್ಲು ಮತ್ತು ರಾಜ್ಯದ ಇತರ ಪಟ್ಟಣಗಳಾದ ದೇವದುರ್ಗ, ಅಂಕೋಲ, ಮುಧೋಳ ಮತ್ತು ಲಿಂಗಸುಗೂರಿನಲ್ಲಿ ಹೊಸ ಶಾಖೆಗಳನ್ನು ತೆರೆಯಲಾಗುವುದು ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT