ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಸ್‌ ಅಧಿಕಾರಿಗಳ ವರ್ಗ

Last Updated 12 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳೂರು, ಹುಬ್ಬಳ್ಳಿ–ಧಾರವಾಡ ನಗರ ಪೊಲೀಸ್‌ ಕಮಿಷನರ್‌ಗಳು ಸೇರಿದಂತೆ ರಾಜ್ಯ ಸರ್ಕಾರ ಗುರುವಾರ ಐವರು ಐಪಿಎಸ್‌ ಅಧಿಕಾರಿಗ­ಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕೆ.ಎಸ್‌.ಆರ್‌. ಚರಣರೆಡ್ಡಿ ಅವರನ್ನು ಗೃಹ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ನೇಮಿಸ­ಲಾಗಿದೆ. ಜತೆಗೆ ಹೆಚ್ಚುವರಿಯಾಗಿ ತರಬೇತಿ ವಿಭಾಗದ ಐಜಿಪಿ ಹುದ್ದೆ ನಿಭಾಯಿಸುವಂತೆ ಸೂಚಿಸಲಾಗಿದೆ.

ಆರ್‌. ಹಿತೇಂದ್ರ ಅವರನ್ನು ಮಂಗಳೂರು ಪೊಲೀಸ್‌ ಆಯುಕ್ತರನ್ನಾಗಿ ನೇಮಿಸಲಾಗಿದೆ. ಬಿ.ಎ. ಪದ್ಮ­ನಯನ ಅವರನ್ನು ಬಂಧಿಖಾನೆಯ ಡಿಐಜಿ ಹುದ್ದೆಗೆ, ಮನೀಷ್‌ ಖರ್ಬಿಕರ್‌ ಅವರನ್ನು ಕೆಎಸ್‌ಆರ್‌ಪಿ ಡಿಐಜಿ ಹುದ್ದೆಗೆ ಹಾಗೂ ರವೀಂದ್ರ ಪ್ರಸಾದ್‌ ಅವರನ್ನು ಹುಬ್ಬಳ್ಳಿ–ಧಾರವಾಡ ಪೊಲೀಸ್‌  ಆಯುಕ್ತರನ್ನಾಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT