ಹೈದರಾಬಾದ್ (ಪಿಟಿಐ): ಒಂಗೋಲ್ ಕ್ಷೇತ್ರದ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಮಂಗಳವಾರ ತೆಲುಗುದೇಶಂ ಪಕ್ಷ (ಟಿಡಿಪಿ) ಸೇರಿದ್ದಾರೆ.
ಪ್ರಕಾಶಂ ಜಿಲ್ಲೆಯ ಶ್ರೀನಿವಾಸುಲು ರೆಡ್ಡಿ ಹಾಗೂ ಇತರ ಕಾಂಗ್ರೆಸ್ ಮುಖಂಡರನ್ನು ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಚಂದ್ರಬಾಬು ನಾಯ್ಡು ಅವರಂತಹ ನಾಯಕರಿಂದ ಮಾತ್ರ ವಿಭಜಿತ ಆಂಧ್ರ-ಪ್ರದೇಶದ ಅಭಿವೃದ್ಧಿ ಸಾಧ್ಯ ಎಂದು 2004ರಿಂದ ಒಂಗೋಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮಾಗುಂಟ ಹೇಳಿದರು.