ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ಕುಟುಂಬದ ಮೂವರ ಆತ್ಮಹತ್ಯೆ

Last Updated 16 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮಾಲೂರು: ತಾಲ್ಲೂಕಿನ ಕೆ.ಜಿ.ಹಳ್ಳಿ ಗ್ರಾಮದಲ್ಲಿ ಸಾಲದ ಬಾಧೆಯಿಂದ ಒಂದೇ ಕುಟುಂಬದ ಮೂವರು  ಸೈನೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ನಡೆದಿದೆ.

ಮೃತಪಟ್ಟವರನ್ನು ಕೆ.ಜಿ.ಹಳ್ಳಿ ಗ್ರಾಮದ ಚಿನ್ನದ ಒಡವೆ ತಯಾರಿಸುವ ಮಾರ್ಕಂಡಾಚಾರಿ (45), ಪತ್ನಿ ಮಂಜುಳಾ (30), ಪುತ್ರಿ ಕುಸುಮಾ (16) ಎಂದು ಗುರುತಿಸಲಾಗಿದೆ.

ವಿವರ: ತಾಲ್ಲೂಕಿನ ಕೆ.ಜಿ.ಹಳ್ಳಿ ಗ್ರಾಮದಲ್ಲಿ ಮಾರ್ಕಂಡಾಚಾರಿ ಚಿನ್ನದ ಒಡವೆ ಅಂಗಡಿ ನಡೆಸುತ್ತಿದ್ದರು. ಈಚೆಗೆ ಅವರಿಗೆ ಸಾಲದ ಹೊರೆ ಹೆಚ್ಚಾಗಿತ್ತು. ಮನೆಯಲ್ಲಿದ್ದ ಮಗ ಜಗದೀಶ್‌ನನ್ನು ಕೆಲಸದ ಮೇಲೆ ಹೊರಗೆ ಕಳುಹಿಸಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT