ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಎನ್‌ಜಿಸಿ ಶುಭಾರಂಭ

Last Updated 16 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮಂಗಳೂರು: ಅಂತರರಾಷ್ಟ್ರೀಯ ಆಟಗಾರರನ್ನು ಒಳಗೊಂಡ ಡೆಹ್ರಾಡೂನಿನ ಒಎನ್‌ಜಿಸಿ ತಂಡದವರು, ಗುರುವಾರ ಆರಂಭವಾದ 5ನೇ ಅಖಿಲ ಭಾರತ ಆಹ್ವಾನ ವಾಲಿಬಾಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ತಿರುವನಂತಪುರದ ಕೇರಳ ರಾಜ್ಯ ವಿದ್ಯುಚ್ಛಕ್ತಿ ಮಂಡಳಿ ತಂಡವನ್ನು 3-0 ನೇರ ಸೆಟ್‌ಗಳಿಂದ ಸೋಲಿಸಿದರು.

ಮಂಗಳಾ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಶಿವಪ್ರಸಾದ್ ಬಾಳಿಗಾ ಸ್ಮರಣಾರ್ಥ ನಡೆಯುತ್ತಿರುವ ಈ ಹೊನಲು ಬೆಳಕಿನ ಟೂರ್ನಿಯ ಮೊದಲ ಪಂದ್ಯ ನಡೆದಿದ್ದು 50 ನಿಮಿಷ ಮಾತ್ರ.
 
ಕೆ.ಎಸ್.ಇ.ಬಿ. ಯಾವುದೇ ಹಂತದಲ್ಲಿ ಪ್ರಬಲ ಪೈಪೋಟಿ ನೀಡುವಂತೆ ಕಾಣಲಿಲ್ಲ. ನಾಯಕ ರತೀಶ್ ನಾಯರ್ ಅವರ ಅಮೋಘ ಬ್ಲಾಕ್ ಮತ್ತು ಮನ್‌ದೀಪ್ ಸಿಂಗ್ ಅವರ ಅಮೋಘ ದಾಳಿಯ ಆಟದಿಂದ ಒಎನ್‌ಜಿಸಿ 25-21, 25-21, 25-17ರಲ್ಲಿ ಜಯಗಳಿಸಿತು. ಕೆಎಸ್‌ಇಬಿ ಪರ ಮನು ಜೋಸೆಫ್ ಅವರಿಂದ ಮಾತ್ರ ಉತ್ತಮ ಆಟ ಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT