ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಮುಂದಿನ 5 ವರ್ಷಗಳ ಅವಧಿಗಾಗಿ ಬೆಂಗಳೂರು ಜಿಲ್ಲೆ ಮತ್ತು ನಗರ ಕ್ಷೇತ್ರದಿಂದ 15 ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಡಿ. 17 ಅಂತಿಮ ದಿನ. ಡಿ. 18 ರಂದು ನಾಮಪತ್ರಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಡಿ. 19 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನ.
ಜ. 5 ರಂದು ಮತದಾನ ಹಾಗೂ ಜ. 6 ರಂದು ಮತ ಎಣಿಕೆ ನಡೆಯಲಿದೆ. ಅಂದೇ ಫಲಿತಾಂಶ ಘೋಷಿಸಲಾಗುವುದು ಎಂದು ಚುನಾವಣಾಧಿಕಾರಿ ಎಂ.ಡಿ.ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.