ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕಲಿಗರ ಸಂಘದ ಚುನಾವಣೆ: 8 ನಾಮಪತ್ರ

ಬಲಾಬಲ ಪ್ರದರ್ಶಿಸುವ ಕಸರತ್ತು ಆರಂಭ
Last Updated 13 ಡಿಸೆಂಬರ್ 2013, 8:51 IST
ಅಕ್ಷರ ಗಾತ್ರ

ತುಮಕೂರು: ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನದ ಚುನಾವಣೆ ರಂಗೇರಿದ್ದು, ಈಗಾಗಲೇ 8 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಡಿ. 17 ಕೊನೆ ದಿನವಾಗಿದ್ದು, ಇನ್ನೂ ಸಾಕಷ್ಟು ಮಂದಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ಜೆಡಿಎಸ್‌ ಮುಖಂಡರೂ ಆದ ವಕೀಲ ಜಿ.ಎಲ್‌.ನರೇಂದ್ರಬಾಬು ತಮ್ಮ ಬೆಂಬಲಿಗ­ರೊಂದಿಗೆ ಗುರುವಾರ ನಾಮಪತ್ರ ಸಲ್ಲಿಸಿದರು.

ಮೆರವಣಿಗೆ: ಸಿ.ಎನ್‌.ಶಶಿಕಿರಣ್‌ ಬೆಂಬಲಿಗ­ರೊಂದಿಗೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ನಗರದ ಟೌನ್‌ಹಾಲ್‌ ವೃತ್ತದಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ತಲುಪಿದರು.

ಇದುವರೆಗೆ ಬಿ.ಎಚ್‌.ಜಗದೀಶ್‌, ವತ್ಸಲಾ ನಾಗರಾಜ್‌, ಹನಮಂತರಾಯಪ್ಪ, ಎಚ್‌.ಕೆ.­ಮಲ್ಲಿಕಾರ್ಜುನ, ಯಲಚವಾಡಿ ನಾಗರಾಜ್‌, ಎ.ಕೃಷ್ಣಮೂರ್ತಿ ಸೇರಿದಂತೆ 8 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.

ರಾಜ್ಯ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಿಂದ ಇಬ್ಬರನ್ನು ಆಯ್ಕೆ ಮಾಡಲು ಅವಕಾಶವಿದೆ. ಆದರೆ 2 ಸ್ಥಾನಗಳಿಗೆ 10ಕ್ಕೂ ಹೆಚ್ಚು ಆಕಾಂಕ್ಷಿ­ಗಳಿದ್ದು, ಪರಸ್ಪರ ತುರುಸಿನ ಸ್ಪರ್ಧೆ ಏರ್ಪಡಲಿದೆ.

ಜಿಲ್ಲೆಯಲ್ಲಿ ಸುಮಾರು 23 ಸಾವಿರ ಮಂದಿ ಮತದಾರರಿದ್ದು, ಮತದಾರರನ್ನು ಓಲೈಸುವ ಕಸರತ್ತು ಅಭ್ಯರ್ಥಿಗಳಿಂದ ಈಗಾಗಲೇ ಆರಂಭವಾಗಿದೆ. ಸಾಮಾನ್ಯ ಚುನಾವಣೆ­ಯಂ­ತೆಯೇ ಆಸೆ ಆಮಿಷದ ಮೂಲಕ ಮತ ಸೆಳೆಯಲು ಮುಂದಾಗಿದ್ದಾರೆ. ಅಲ್ಲದೆ ಬಹಿರಂಗವಾಗಿ ಮೆರವಣಿಗೆ ಮೂಲಕ ತಮ್ಮ ಬಲಾಬಲ ಪ್ರದರ್ಶಿಸುವ ಕಸರತ್ತು ನಡೆಯುತ್ತಿದೆ.

ಜಿಲ್ಲೆಯ ತುಮಕೂರು ಸೇರಿದಂತೆ 8 ತಾಲ್ಲೂಕು ಕೇಂದ್ರಗಳಲ್ಲಿ ಚುನಾವಣೆ ನಡೆಯಲಿದೆ. ಒಬ್ಬ ಸದಸ್ಯ ಎರಡು ಮತ ಚಲಾಯಿಸಬಹುದು.

ನಾಮಪತ್ರ ಹಿಂತೆಗೆದುಕೊಳ್ಳಲು ಡಿ. 19 ಅಂತಿಮ ದಿನ. ಜ. 5ರಂದು ಚುನಾವಣೆ ನಡೆಯಲಿದ್ದು, 6ರಂದು ಫಲಿತಾಂಶ ಪ್ರಕಟ­ವಾಗಲಿದೆ ಎಂದು ಸಹಕಾರ ಇಲಾಖೆ ಉಪ ನಿಬಂಧಕ ಬಾಲಶೇಖರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT