ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಗ್ಗಟ್ಟಿನ ಪ್ರದರ್ಶನ ಅಗತ್ಯ: ವೆಟೋರಿ

Last Updated 18 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಲಿರುವ ಡೇನಿಯಲ್ ವೇಟೋರಿ `ಈ ಟೂರ್ನಿ ಸವಾಲಿನಿಂದ ಕೂಡಿರಲಿದೆ~ ಎಂದಿದ್ದಾರೆ.

ಆರಂಭದಲ್ಲಿ ಒಂದೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದರೆ ಪ್ರಶಸ್ತಿಯ ಆಸೆ ಕೈಬಿಡಬೇಕು ಎಂದು ಅವರು ಭಾನುವಾರ ತಿಳಿಸಿದರು.. `ಆದಷ್ಟು ಬೇಗ ತಂಡದ ಎಲ್ಲ ಸದಸ್ಯರು ಪರಸ್ಪರರನ್ನು ಅರ್ಥೈಸಿಕೊಳ್ಳಬೇಕು. ಏಕೆಂದರೆ ಟೂರ್ನಿಗೆ ಇನ್ನು ಹೆಚ್ಚು ದಿನ ಉಳಿದಿಲ್ಲ. ಒಗ್ಗಟ್ಟಿನ ಪ್ರದರ್ಶನ ನೀಡುವುದು ಮುಖ್ಯ~ ಎಂದರು.

`ಮೊದಲ ಎರಡೂ ಪಂದ್ಯಗಳಲ್ಲಿ ಸೋಲು ಅನುಭವಿಸಿದರೆ ಟೂರ್ನಿಯಿಂದ ಹೊರಬಿದ್ದಂತೆ. ಆದ್ದರಿಂದ ಇನ್ನುಳಿದ ಮೂರು- ನಾಲ್ಕು ದಿನಗಳಲ್ಲಿ ಕಠಿಣ ಅಭ್ಯಾಸ ನಡೆಸುವುದು~ ಎಂದರು. ಸೆಪ್ಟೆಂಬರ್ 23 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡ ವಾರಿಯರ್ಸ್ ಜೊತೆ ಪೈಪೋಟಿ ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT