ಭುವನೇಶ್ವರ (ಐಎಎನ್ಎಸ್): ಒಡಿಶಾದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ, ರೈತರಿಗೆ ಉಚಿತ ವಿದ್ಯುತ್ ಹಾಗೂ ₨25,000 ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ನೋಂದಣಿ ಮಾಡಿರುವ ನಿರುದ್ಯೋಗಿ ಯುವಕರಿಗೆ ಐದು ವರ್ಷಗಳವರೆಗೆ ಮಾಸಿಕ ಭತ್ಯೆ, ಬಡತನ ರೇಖೆಗಿಂತ ಕೆಳಗಿನ ಕುಟುಂಬಕ್ಕೆ ಸೇರಿದ ಶಿಕ್ಷಿತ ಯುವಜನರಿಗೆ ಒಂದು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ನೀಡುವ ಭರವಸೆಯನ್ನೂ ಕಾಂಗ್ರೆಸ್ ನೀಡಿದೆ.