ಯಲಹಂಕ: ಒತ್ತೆಯಾಗಿಟ್ಟುಕೊಂಡು ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಬಾಗಲೂರು ಗೋಪಾಲಪುರ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳ ತಂಡ, ಸ್ಥಳೀಯ ಪೊಲೀಸರ ನೆರವಿನಿಂದ ಇಟ್ಟಿಗೆ ಗೂಡಿನ ಶೆಡ್ಗಳಲ್ಲಿ ಇದ್ದ ಒಡಿಶಾ ಮೂಲದ 12 ಮಕ್ಕಳು ಸೇರಿದಂತೆ 62 ಮಂದಿ ದಿನಗೂಲಿ ಕಾರ್ಮಿಕರನ್ನು ಬಿಡುಗಡೆಗೊಳಿಸಿತು.