ಜಾಲಹಳ್ಳಿ: ಇಲ್ಲಿಗೆ ಸಮೀಪದ ಉತ್ತಿನ ಯಲ್ಲಮ್ಮದೇವಸ್ಥಾನದ ಹತ್ತಿರ ಸೋಮವಾರ ನಾರಾಯಣಪೂರ ಬಲದಂಡೆ ಕಾಲುವೆಯ 9ನೇ ವಿತರಣಾ ನಾಲೆಯ ಬಿಡಿ 2ರಲ್ಲಿ ಕಾಲುವೆ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿದೆ.
ರೈತರು ಸಾವಿರಾರು ರೂಪಾಯಿ ಸಾಲ ಮಾಡಿ ಬೆಳೆದ ಬೆಳೆಗಳಿಗೆ ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗಿ ತೀವ್ರ ತೊಂದರೆ ಅನುಭವಿಸಬೇಕಾಗಿದೆ.
ಈಚೆಗೆ ಈ ನಾಲೆಗೆ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ದುರಸ್ಥಿ ಹಾಗೂ ಸ್ವಚ್ಚ ಮಾಡಲು ಕಾಮಾಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಇಲ್ಲಿಯ ರೈತರು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬಸವರಾಜ ತೇಕೂರು ತಿಳಿಸಿದರು.
ಸಂಬಂಧಿಸಿದ ಎನ್ನಾರ್ಬಿಸಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಕಾಲುವೆ ಒಡೆಯಲು ಕಾರಣವಾಗಿದೆ ಎಂದು ರೈತರು ಆರೋಪಿಸಿದ್ದಾರೆ.